ಮಾಗಡಿ ರಂಗನಾಥಸ್ವಾಮಿ ದೇವಸ್ಥಾನ
![ತಿರುಮಲ,ಮಾಗಡಿ](https://cdn.s3waas.gov.in/s35f0f5e5f33945135b874349cfbed4fb9/uploads/2018/07/2018072546.jpg)
ರಾಮನಗರದಿಂದ 36 ಕಿ.ಮೀ. ದೂರದಲ್ಲಿರುವ ಮಾಗಡಿ ಪಟ್ಟಣದಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯವು ಚೋಳರ ಕಾಲದ ಪ್ರಸಿದ್ಧ ದೇವಾಲಯವಾಗಿದ್ದು, ಶ್ರೀ ರಂಗನಾಥಸ್ವಾಮಿ ವಿಗ್ರಹದÀ ಮುಖ ಪಶ್ಚಿಮ ದಿಕ್ಕಿನಲ್ಲಿದ್ದು, ಉಳಿದ ಎಲ್ಲಾ ವಿಗ್ರಹಗಳ ಪ್ರತಿಮೆಗಳ ಮುಖ ಪೂರ್ವದಿಕ್ಕಿಗಿವೆ. ದೇವಾಲಯದ ಮುಂಭಾಗದಲ್ಲಿ ಪುರಾತನ ಕಾಲದ ಪುಷ್ಕರಣಿ ಇದೆ. ನಿತ್ಯ ದಾಸೋಹವಿರುವ ಈ ದೇವಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳು ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನ
![ಆಂಜನೇಯ ದೇವಸ್ಥಾನ, ಕೆಂಗಲ್](https://cdn.s3waas.gov.in/s35f0f5e5f33945135b874349cfbed4fb9/uploads/2018/07/2018072535.jpg)
ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನ: ಬೆಂಗಳೂರು-ಮೈಸೂರು ರಸ್ತೆಯಲ್ಲಿ ರಾಮನಗರದಿಂದ 10 ಕಿ.ಮೀ. ದೂರದಲ್ಲಿರುವ ಕೆಂಗಲ್ ಆಂಜುನೇಯ ದೇವಾಲಯ ಪ್ರಕೃತಿ ನಿರ್ಮಿತ ಕೆಂಪು ಶಿಲೆಯಲ್ಲಿರುತ್ತದೆ. ಪ್ರತಿ ಶನಿವಾರ ಧಾರ್ಮಿಕ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾಗಿದ್ದು, ಪ್ರವಾಸಿಗರಿಗಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಕೆಂಗಲ್ ಹನುಮಂತಯ್ಯನವರು ನಿರ್ಮಿಸಿದ ಈ ದೇವಾಲಯವು ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿದ್ದು ಹೆಚ್ಚಿನ ಸಂಖ್ಯೆ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.